ಪ್ರಜ್ವಲ್‌ ಗೆದ್ದರೆ ಎನ್‌ಡಿಎಯಿಂದ ಕಾನೂನು ಕ್ರಮ: ಅಶೋಕ್‌

| Published : May 06 2024, 11:16 AM IST

R Ashok
ಪ್ರಜ್ವಲ್‌ ಗೆದ್ದರೆ ಎನ್‌ಡಿಎಯಿಂದ ಕಾನೂನು ಕ್ರಮ: ಅಶೋಕ್‌
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಜ್ವಲ್‌ ರೇವಣ್ಣ ಇನ್ನೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸಂಸದರಾಗಿಯೇ ಇದ್ದಾರೆ. ಅವರು ಈ ಚುನಾವಣೆಯಲ್ಲಿ ಗೆದ್ದು ಎನ್‌ಡಿಎ ಅಭ್ಯರ್ಥಿಯಾದರೆ ಅವರ ವಿರುದ್ಧ ಪಕ್ಷದ ವತಿಯಿಂದ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

ಬೆಂಗಳೂರು :  ಪ್ರಜ್ವಲ್‌ ರೇವಣ್ಣ ಇನ್ನೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸಂಸದರಾಗಿಯೇ ಇದ್ದಾರೆ. ಅವರು ಈ ಚುನಾವಣೆಯಲ್ಲಿ ಗೆದ್ದು ಎನ್‌ಡಿಎ ಅಭ್ಯರ್ಥಿಯಾದರೆ ಅವರ ವಿರುದ್ಧ ಪಕ್ಷದ ವತಿಯಿಂದ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್‌ ನಡೆಸಿದ ಮಹಿಳಾ ದೌರ್ಜನ್ಯದ ಘಟನೆಗಳು ಯಾವ ಸಮಯದಲ್ಲಿ ನಡೆದಿವೆ ಎಂದು ಇನ್ನೂ ತನಿಖಾ ತಂಡ ವರದಿ ನೀಡಬೇಕಿದೆ. ನಮ್ಮ ಹೊಂದಾಣಿಕೆಯಲ್ಲಿ ಇನ್ನೂ ಪ್ರಜ್ವಲ್‌ ಗೆದ್ದಿಲ್ಲ. ಈಗ ಪ್ರಜ್ವಲ್‌ ಸಂಸದರಾಗಿರುವುದು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯಲ್ಲೇ. ಜೆಡಿಎಸ್‌ ಪಕ್ಷ ಈಗಾಗಲೇ ಪ್ರಜ್ವಲ್‌ ವಿರುದ್ಧ ಕ್ರಮ ಕೈಗೊಂಡಿದೆ. ಅವರು ಎನ್‌ಡಿಎ ಸಂಸದರಾದರೆ ನಂತರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಕಳೆದ 2019ರ ಏ.17ರಂದು ಕಡೂರಿನಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಸಿದ್ದರಾಮಯ್ಯ ಅವರು ಪ್ರಜ್ವಲ್‌ ರನ್ನು ಪಕ್ಕದಲ್ಲಿ ಕೂರಿಸಿಕೊಂಡು, ಇವರನ್ನು ಗೆಲ್ಲಿಸಿಕೊಡಿ ಎಂದು ಜನರಲ್ಲಿ ಮನವಿ ಮಾಡಿದ್ದರು. ತೆನೆ ಹೊತ್ತ ಮಹಿಳೆಗೆ ಶಕ್ತಿ ನೀಡಿ ಎಂದು ಅವರೇ ಹೇಳಿದ್ದರು. ಪ್ರಜ್ವಲ್‌ನನ್ನು ಈಗ ರೇಪಿಸ್ಟ್‌ ಎಂದು ಕರೆಯುವ ಸಿದ್ದರಾಮಯ್ಯ, ಆಗ ಟ್ವೀಟ್‌ ಮಾಡಿ, ‘ಹಿ ಈಸ್‌ ಎ ಯಂಗ್‌ ಲೀಡರ್‌ ವಿತ್‌ ಗ್ರೇಟ್‌ ವಿಶನ್‌, ಐ ರಿಕ್ವೆಸ್ಟ್‌ ಎವರಿವನ್‌ ಟು ಕಾಸ್ಟ್‌ ದೇರ್‌ ವೋಟ್ಸ್‌ ಇನ್‌ ಹಿಸ್‌ ಫೇವರ್‌’ ಎಂದು ಮನವಿ ಮಾಡಿದ್ದರು. ಪ್ರಜ್ವಲ್‌ ಈಗಲೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯಿಂದಲೇ ಸಂಸದರಾಗಿ ಇದ್ದಾರೆ ಎಂದರು.