ಪ್ರಕೃತಿ ವಿಕೋಪ: ಹಾನಿಯಾಗಿರುವ ರೈತರ ಬೆಳೆಗೆ ಪರಿಹಾರ ನೀಡಿಮೊದಲೇ ಬರದಿಂದ ತತ್ತರಿಸಿದ್ದ ರೈತರಿಗೆ ಪ್ರಕೃತಿ ವಿಕೋಪದಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಕೂಡಲೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು, ಬರಪರಿಹಾರವನ್ನು ತುರ್ತು ಕೈಗೊಳ್ಳಬೇಕು, ಬೆಳೆ ನಷ್ಟಕ್ಕೆ ವೈಜ್ಞಾನಿಕ ಸರ್ವೆ ನಡೆಸಬೇಕು, ಗೋಶಾಲೆ ಆರಂಭಿಸಿ ಜಾನುವಾರುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ತಾಲೂಕು ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.