ಕುಡಿಯುವ ನೀರಿನ ಸಮಸ್ಯೆ ಪರಿಹರಿಸದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಹೋರಾಟ: ಮಹಮ್ಮದ್ ಆಲಿಹಿಂದೆ ಎಡಿಬಿ ಯೋಜನೆಯಲ್ಲಿ ಅನುಷ್ಠಾನಗೊಂಡ ಕುಡಿಯುವ ನೀರು ಯೋಜನೆ ವಿಫಲವಾಗಿದ್ದು, ಈಗಿನ ಜಲಸಿರಿ ಯೋಜನೆಯೂ ವಿಫಲವಾದಂತಾಗಿದೆ. ತಕ್ಷಣ ನೀರಿನ ಅಂಶ ಕಡಿಮೆ ಇರುವಲ್ಲಿ ಹೊಸದಾಗಿ ಕೊಳವೆಬಾವಿ ತೆರೆದು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದಲ್ಲಿ ಜಲಸಿರಿ ಹಾಗೂ ನಗರಸಭೆ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.