ಮಾಸ್ತಿಗೌಡನ ಕೊಂದಿದ್ದವರಿಗೆ ಚನ್ನರಾಯಪಟ್ಟಣದಲ್ಲಿ ನಾಲ್ಕನೇ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆಹನ್ನೊಂದು ತಿಂಗಳ ಹಿಂದೆ ಮಧ್ಯಾಹ್ನದ ವೇಳೆ ನಡುರಸ್ತೆಯಲ್ಲಿ ರೌಡಿಶೀಟರ್ ಮಾಸ್ತಿಗೌಡನ ಹತ್ಯೆ ಮಾಡಿದ ೧೧ ಮಂದಿ ಅಪರಾಧಿಗಳಿಗೆ ಚನ್ನರಾಯಪಟ್ಟಣದ ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ತರ ತೀರ್ಪು ನೀಡಿದೆ. ೧೧ ಮಂದಿ ಅಪರಾಧಿಗಳಲ್ಲಿ ೯ ಅಪರಾಧಿಗಳಿಗೆ ಕಠಿಣ ಕಾರಾಗೃಹ ವಾಸ, ಜೀವಾವಧಿ ಶಿಕ್ಷೆ ಹಾಗೂ ತಲಾ ೨೫ ಸಾವಿರ ರು. ದಂಡವನ್ನು ವಿಧಿಸಿದೆ.