ಬಿರುಗಾಳಿಗೆ ನೆಲಕ್ಕುರುಳಿದ ಬಾಳೆ, ಲಕ್ಷಾಂತರ ರುಪಾಯಿ ಹಾನಿಗುರುವಾರ ತಡರಾತ್ರಿ ಬೀಸಿದ ಬಿರುಗಾಳಿ, ಮಳೆಗೆ ಕೊಪ್ಪಳ ಮತ್ತು ಗಂಗಾವತಿ ತಾಲೂಕಿನಾದ್ಯಂತ ಬಾಳೆ ಬೆಳೆ ನೆಲಕ್ಕೆ ಉರುಳಿ, ಲಕ್ಷಾಂತರ ರುಪಾಯಿ ಹಾನಿಯಾಗಿದೆ. ಕೊಪ್ಪಳ ತಾಲೂಕಿನ ಡೊಂಬರಳ್ಳಿ ಗ್ರಾಮದ ಬಸವರಡ್ಡಿ ಕರಡ್ಡಿ ಅವರಿಗೆ ಸೇರಿದ ಒಂದೂವರೆ ಎಕರೆ ಏಲಕ್ಕಿ ಬಾಳೆಯ ತೋಟ ಸಂಪೂರ್ಣ ನೆಲಕ್ಕೆ ಉರುಳಿ ಬಿದ್ದಿದ್ದು, ಸಂಪೂರ್ಣ ಹಾನಿಯಾಗಿದೆ.