ಪೀ ಕಾರ್ಡ್ ಬ್ಯಾಂಕಿನ ಅವ್ಯವಹಾರ,ಬೈಲಾ ಉಲ್ಲಂಘನೆ,ಪೀ ಕಾರ್ಡ್ ಬ್ಯಾಂಕಿನ ಅಧ್ಯಕ್ಷ ಸಿ.ಎನ್.ಕೆಂಪೇಗೌಡ ಹಾಗೂ ವ್ಯವಸ್ಥಾಪಕಿ ಭಾಗ್ಯ ವಿರುದ್ಧ ಘೋಷಣೆ ಕೂಗಿದ ಧರಣಿ ನಿರತರು, ಬ್ಯಾಂಕ್ ನ ಅವ್ಯವಹಾರಗಳ ಬಗ್ಗೆ ತನಿಖೆಗೆ ಆಗ್ರಹಿಸಿದರು. ನಿರ್ದೇಶಕರ ದಿಢೀರ್ ಪ್ರತಿಭಟನೆಯಿಂದಾಗಿ ಬ್ಯಾಂಕಿನ ವಹಿವಾಟಿಗೆ ಕೆಲಕಾಲ ಅಡ್ಡಿ ಉಂಟಾಗಿತ್ತು. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರವೇಶ ದ್ವಾರ ತೆರವುಗೊಳಿಸಿ ವಹಿವಾಟಿಗೆ ಅನುವು ಮಾಡಿಕೊಟ್ಟರು.