ಅಂಕಿತಾ ಕೊಣ್ಣೂರಗೆ ಸಚಿವ ತಿಮ್ಮಾಪೂರ ಅಭಿನಂದನೆ

| Published : May 10 2024, 01:39 AM IST

ಸಾರಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರು ಸಾಧನೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಧೋಳ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರು ಸಾಧನೆಯನ್ನು ಪ್ರಶಂಸಿರುವ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರು, ಪ್ರಥಮ ಸ್ಥಾನ ಪಡೆದು ತಾಲೂಕಿಗೆ ಕೀರ್ತಿ ತಂದಿರುವುದಕ್ಕೆ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.ಇದೆ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆ ಮಕ್ಕಳ ಸಾಧನೆಗಾಗಿ ಶ್ರಮಿಸಿದ ಎಲ್ಲ ಶಿಕ್ಷಕರಿಗೂ, ಶಿಕ್ಷಣ ಇಲಾಖೆಗೂ, ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ಸಚಿವರು ಅಭಿನಂದಿಸಿದರು. ನಮ್ಮ ತಾಲೂಕಿಗೆ ಮತ್ತು ಜಿಲ್ಲೆಗೆ ಇಡೀ ರಾಜ್ಯಕ್ಕೆ ಕೀರ್ತಿ ತಂದಿರುವ ಅಂಕಿತಾ ಕೊಣ್ಣೂರಗೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಉದಯಕುಮಾರ ಸಾರವಾಡ, ವೆಂಕಣ್ಣ ಗಿಡಪ್ಪನವರ, ರಾಜುಗೌಡ ನ್ಯಾಮಗೌಡ, ಲಕ್ಷ್ಮಣ್ಣ ಮಾಲಗಿ, ಮುದಕಣ್ಣಾ ಅಂಬಿಗೇರ, ಯಶವಂತ ಚವ್ಹಾಣ, ಮಲಪ್ಪ ಮಳಲಿ, ಬಸನಗೌಡ ಪಾಟೀಲ ಹಾಗೂ ಗ್ರಾಮದ ಪ್ರಮುಖರು ಇದ್ದರು.