ಜೋಡಿ ಕೊಲೆಗೆ ಪೊಲೀಸರ ವೈಫಲ್ಯವೇ ಕಾರಣ: ಶಾಸಕ ಚನ್ನಬಸಪ್ಪಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಇದೆ ಎಂದು ಹೇಳುತ್ತಾರೆ. ಆದರೆ, ಕೊಲೆಗಳು ನಡೆಯುತ್ತಲೇ ಇವೆ. ಈ ಕೊಲೆಯ ಹಿಂದೆ ರೌಡಿಗಳ ಪಾತ್ರವಿದೆ. ಪೊಲೀಸ್ ಇಲಾಖೆಗೆ ಸಮಗ್ರ ಮಾಹಿತಿ ಇತ್ತು. ಚುನಾವಣೆಯ ದಿನ ಕೆಲವು ಕಡೆ ತಲವಾರುಗಳು ಹೊರ ಬಂದಿದ್ದವು. ಲಷ್ಕರ್ ಮೊಹಲ್ಲಾದಲ್ಲೂ ಕೂಡ ತಲವಾರುಗಳು ಇದ್ದವು ಎಂಬ ಸ್ಪಷ್ಟ ಮಾಹಿತಿ ಪೊಲೀಸರಿಗೆ ಗೊತ್ತಿತ್ತು. ಆದರೂ ಕೂಡ ಅವರು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿಲ್ಲ.